ಒಂದು ಬಾರಿ ಸ್ಮರಣೆ
ಒಂದು ಬಾರಿ ಸ್ಮರಣೆ ಸಾಲದೆ
ಆನಂದ ತೀರ್ಥರ, ಪೂರ್ಣಪ್ರಜ್ಞರ, ಸರ್ವಜ್ಞರಾಯರ, ಮಧ್ವರಾಯರ ।।ಪ।।
ಹಿಂದನೇಕ ಜನ್ಮಗಳಲಿ ನೊಂದು ಯೋನಿಯಲ್ಲಿ ಬಂದು |
ಇಂದಿರೇಶ ಹರಿಯ ಪಾದವ ಹೊಂದಬೇಕೆಂಬುವರಿಗೆ ।।ಒಂದು।।
ಆರುಮಂದಿ ವೈರಿಗಳನು ಸೇರಲೀಸದಂತೆ ಜರಿದು |
ಧೀರನಾಗಿ ಹರಿಯ ಪಾದವ ಸೇರಬೇಕೆಂಬುವರಿಗೆ ।।ಒಂದು।।
ಘೋರ ಸಂಸಾರಾಂಬುಧಿಗೆ ಪರಮಜ್ಞಾನವೆಂಬ ವಾಡೆ |
ಏರಿ ಮೆಲ್ಲನೆ ಹರಿಯ ಪಾದ ಸೇರಬೇಕೆಂಬುವರಿಗೆ ।।ಒಂದು।।
ಹೀನಬುದ್ಧಿಯಿಂದ ಶ್ರೀಹಯವದನನ ಜರಿದು |
ತಾನು ಬದುಕಲಾರದಿರಲು ತೋರಿಕೊಟ್ಟ ಮಧ್ವಮುನಿಯ ।।ಒಂದು।।
Comments
Post a Comment